Mane Maddu

Collection of Home remedies,care tips,useful tips and cooking/kitchen tips * "ಕನ್ನಡದ ಕಂಪಿನ ಸಿರಿಗಂಧ - ಕನ್ನಡದಲ್ಲಿ ಅಡಿಗೆ ಟಿಪ್ಸ್ ಮತ್ತು ಮನೆಮದ್ದು ಬ್ಲಾಗ್'

ಸೋಂಪು ಕಾಳನ್ನು ಪ್ರತಿದಿನ ಊಟವಾದ ಬಳಿಕ ಒಂದೆರಡು ಚಮಚ ತಿನ್ನುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.ಊಟದ ನಂತರ ತಿನ್ನುವುದರಿಂದ ಬಾಯಲ್ಲಿನ ವಾಸನೆಯೂ ಕಮ್ಮಿಯಾಗುತ್ತದೆ.

ಸೋಂಪು ಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದರ ನೀರಿನಿಂದ ಕಣ್ಣುಗಳನ್ನು ತೊಳೆಯುವುದರಿಂದ ಕಣ್ಣಿನ ಅನೇಕ ತೊಂದರೆಗಳು ನಿವಾರಣೆಗಳಾಗುತ್ತವೆ.

ಸೋಂಪು ಅನ್ನು ನೀರಿನಲ್ಲಿ ಕುದಿಸಿ, ಅದರ ಡಿಕಾಕ್ಷನ್ ತಯಾರಿಸಿ, ಅದನ್ನು ಸೇವಿಸುವುದರಿಂದ ಮಹಿಳೆಯರಲ್ಲಿ ಮಾಸಿಕ ದಿನಗಳಲ್ಲಿ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಹೊಟ್ಟೆನೋವು ಮತ್ತು ಇತರೆ ತೊಂದರೆ ನಿವಾರಣೆ. ಪೀರಿಯಡ್ಸ್ ಕೂಡ ರೆಗ್ಯುಲರ್ ಆಗಿ ಇರುತ್ತದೆ.

ಇದು ಮಕ್ಕಳಿಗೂ ಒಳ್ಳೆಯದು. ಇದರಿಂದ ಅವರಲ್ಲಿ ಉಂಟಾಗುವ ಉದರ ತೊಂದರೆಗಳ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.